Author: admin
ಪುತ್ತೂರು: ಆ.7ರಂದು(ನಾಳೆ) ಪುತ್ತೂರಿನಲ್ಲಿ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾಮಟ್ಟದ ತಿರಂಗಾ ಯಾತ್ರೆ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಸಚಿವರು ಹಾಗೂ ಪರಿಷತ್ ಸದಸ್ಯರಾದ ಸಿ.ಟಿ.ರವಿ ಭಾಗವಹಿಸಲಿದ್ದಾರೆ. ಬಿಜೆಪಿ ಹಾಗೂ ಪುತ್ತಿಲ ಪರಿವಾರದ ಒಳಜಗಳದ ಮಧ್ಯೆ ಈ ಯಾತ್ರೆಯು ಅತ್ಯಂತ ಮಹತ್ವವನ್ನು ಪಡೆದಿದೆ. ಆ.7ರಂದು ಮಧ್ಯಾಹ್ನ 3 ಗಂಟೆಗೆ ಪುತ್ತೂರಿನ ಮಹಾಲಿಂಗೇಶ್ವರ ದೇವಳದ ಮುಂಭಾಗದಿಂದ ಯಾತ್ರೆ ಆರಂಭಗೊಂಡು ನಗರದ ಕಿಲ್ಲೆ ಮೈದಾನದವರೆಗೆ ನಡೆಯಲಿದೆ. ರಾಷ್ಟ್ರಧ್ವಜ ಹಿಡಿದು 5 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವರು. ಸಭಾ ಕಾರ್ಯಕ್ರಮದಲ್ಲಿ ಬಿ.ವೈ ವಿಜಯೇಂದ್ರ, ಸಿ.ಟಿ.ರವಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಸೇರಿದಂತೆ ಪ್ರಮುಖರು ಭಾಗವಹಿಸುವರು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಗಿತ್ತು. ಆದರೆ ಮಹತ್ತರ ಬೆಳವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಆಗಮನ ಬಹುತೇಕ ಅನುಮಾನ ಎನ್ನಲಾಗಿದೆ. ಕಿಲ್ಲೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಪ್ರಸ್ತುತ ಪುತ್ತೂರಿನ ಟೌನ್ ಹಾಲ್ಗೆ ಶಿಫ್ಟ್ ಮಾಡಲಾಗಿದೆ. ತಿರಂಗಾ ಯಾತ್ರೆಗೆ ಐದು ಸಾವಿರ ಜನ ಸೇರಿಸುವ ಗುರಿ; ಶೈಕ್ಷಣಿಕ ಸಂಸ್ಥೆಯಿಂದ ವಿದ್ಯಾರ್ಥಿಗಳನ್ನು ಕರೆ ತರಲು ಯೋಜನೆ ತಿರಂಗಾ ಯಾತ್ರೆ…
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ ಶಾಸಕ ಹರೀಶ್ ಪೂಂಜ
ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು 2026ರ ಜುಲೈ 27ರಂದು ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ (Eco Sensitive Area) ಎಂದು ಘೋಷಿಸುವ ಸಂಬಂಧ ಕರಡು ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಕರಡು ಅಧಿಸೂಚನೆಯಿಂದ ಬೆಳ್ತಂಗಡಿ ಸೇರಿದಂತೆ ಪಶ್ಚಿಮ ಘಟ್ಟ ವ್ಯಾಪ್ತಿಯ ಗ್ರಾಮಗಳ ಜನರ ಭೂಮಿ, ಕೃಷಿ, ಮನೆ ನಿರ್ಮಾಣ, ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಸ್ಥಳೀಯರ ಅಭಿಪ್ರಾಯ ಮತ್ತು ಆಕ್ಷೇಪಣೆಗಳು ಅತ್ಯಂತ ಮಹತ್ವದ್ದಾಗಿವೆ ಎಂದು ಶಾಸಕ ಹರೀಶ್ ಪೂಂಜ ಹೇಳಿದ್ದಾರೆ. ರಾಜ್ಯ ಸರ್ಕಾರ ಈ ವಿಚಾರವನ್ನು ಕೇವಲ ಕೇಂದ್ರ ಸರ್ಕಾರದ ವಿಷಯ ಎಂದು ಕೈಕಟ್ಟಿ ಕುಳಿತುಕೊಳ್ಳದೆ, ಪಶ್ಚಿಮ ಘಟ್ಟ ವ್ಯಾಪ್ತಿಯ ಜನರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ದೃಢವಾದ ನಿಲುವು ತಾಳಬೇಕು. ರೈತರು, ಭೂಮಾಲೀಕರು ಹಾಗೂ ಗ್ರಾಮೀಣ ಜನರ ಬದುಕಿಗೆ ಧಕ್ಕೆಯಾಗುವ ಯಾವುದೇ ಅಂಶಗಳಿದ್ದರೆ ಅವುಗಳನ್ನು ಸ್ಪಷ್ಟವಾಗಿ ವಿರೋಧಿಸಿ, ಜನರ ಪರವಾಗಿ ಕೇಂದ್ರ ಸರ್ಕಾರದ ಮುಂದೆ ಬಲವಾದ ಆಕ್ಷೇಪಣೆ ಸಲ್ಲಿಸುವ…
ಕಟೀಲು ಮೇಳದ ದೇವರು ಬ್ರಾಹ್ಮಣರನ್ನು ಬಿಟ್ಟು ಉಳಿದವರ ಮನೆಗಳಿಗೆ ಹೋಗುವುದಿಲ್ಲ ಹಾಗೂ ಕಟೀಲು ಮೇಳ ಕೋಮುವಾದವನ್ನು ಹರಡಿಸುತ್ತದೆ ಎಂಬ ನವೀನ್ ಸೂರಿಂಜೆ ಆರೋಪಗಳಿಗೆ ಹರಿನಾರಾಯಣ ದಾಸ ಅಸ್ರಣ್ಣ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕಟೀಲು ಮೇಳದ ದೇವರು ಬೇರೆ ಜಾತಿಯವರ ಮನೆಗೆ ಹೋಗುವುದಿಲ್ಲ ಎನ್ನುವ ಹೇಳಿಕೆಯೇ ತಪ್ಪು. ದೇವರನ್ನು ಯಾವ ಮನೆಗೆ ಕೊಂಡೊಯ್ಯಬೇಕು ಎಂಬುದು ಜಾತಿಯ ಆಧಾರದ ಮೇಲೆ ನಿರ್ಧಾರವಾಗುವುದಿಲ್ಲ. ಅದು ಸಸ್ಯಾಹಾರ, ಮಾಂಸಾಹಾರ, ಸಾತ್ವಿಕ ಆಚರಣೆ ಹಾಗೂ ಪೂಜೆಗೆ ಅಗತ್ಯವಾದ ಶುದ್ಧಾಚಾರದ ಆಧಾರದ ಮೇಲೆ ನಿರ್ಧಾರವಾಗುತ್ತದೆ ಎಂದು ಅವರು ಹೇಳಿದ್ದಾರೆ. ಸಸ್ಯಾಹಾರ ಪಾಲಿಸುವ ಬ್ರಾಹ್ಮಣೇತರರ ಮನೆಗಳಲ್ಲಿಯೂ ಕಟೀಲು ದೇವರನ್ನು ಇಟ್ಟು ಪೂಜೆ ಮಾಡಲಾಗುತ್ತದೆ. ನಾರಾಯಣ ಗುರು ಮಂದಿರಗಳಲ್ಲಿಯೂ ಕಟೀಲು ದೇವರ ಪೆಟ್ಟಿಗೆಯನ್ನು ಇಟ್ಟು ಪೂಜೆ ನಡೆಯುತ್ತದೆ. ಮಾಂಸಾಹಾರ ಸೇವಿಸುವ ಮನೆಗಳಲ್ಲಿಯೂ ಪೂಜೆಯ ಸಂದರ್ಭದಲ್ಲಿ ಅಗತ್ಯವಾದ ಶುದ್ಧಾಚಾರ ಪಾಲಿಸಿ, ಪ್ರತ್ಯೇಕ ವ್ಯವಸ್ಥೆ ಮಾಡಿದ ಬಳಿಕ ದೇವರ ಪೂಜೆ ನಡೆಸುವ ಪದ್ಧತಿಯೂ ಇದೆ ಎಂದು ಅವರು ವಿವರಿಸಿದರು. ಬ್ರಾಹ್ಮಣರ ಮನೆಯಾದರೂ ಶುದ್ಧಾಚಾರ ಇಲ್ಲದಿದ್ದರೆ ಅಂತಹ…
ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಕೇರಳದ ಕೊಚ್ಚಿಯಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಸುಳ್ಯ ತಾಲೂಕಿನ ಕಲ್ಲುಮುಟ್ಲು ನಿವಾಸಿ ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಬಂಧಿತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದ್ದು, ಪ್ರಕರಣದ ತನಿಖೆಯನ್ನು ಎನ್ಐಎ ಮುಂದುವರಿಸಿದೆ. ಈತ ಪ್ರಕರಣದ ಆರೋಪಿಗಳು ತಲೆಮರೆಸಿಕೊಳ್ಳಲು ನೆರವು ನೀಡಿದ್ದ ಆರೋಪದಡಿ 13ನೇ ಆರೋಪಿಯಾಗಿ ಗುರುತಿಸಲ್ಪಟ್ಟಿದ್ದಾನೆ. ಪಿಎಫ್ಐ ಸಂಘಟನೆಗೆ ಸಂಬಂಧಿಸಿದ ಈ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ನಡೆಸುತ್ತಿದ್ದು, ಇದುವರೆಗೂ 24 ಆರೋಪಿಗಳನ್ನು ಬಂಧಿಸಲಾಗಿದೆ, ಆರು ಮಂದಿ ತಲೆಮರೆಸಿಕೊಂಡಿದ್ದರು. ಅವರ ಪತ್ತೆಗಾಗಿ ಎನ್ಐಎ ತಲಾ ₹2 ಲಕ್ಷ ಬಹುಮಾನ ಘೋಷಿಸಿತ್ತು. ಇತ್ತೀಚೆಗೆ, ಜುಲೈ 11ರಂದು ಎನ್ಐಎ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ನೌಷದ್ ಮತ್ತು ನಾಸೀರ್ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ವೇಳೆ ಉಮರ್ ಫಾರೂಕ್ ಕೊಚ್ಚಿಯಲ್ಲಿ ಅಡಗಿರುವ ಮಾಹಿತಿ ಲಭ್ಯವಾಗಿದ್ದು, ಅದರ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ…
ಮಂಗಳೂರಿನಲ್ಲಿ ಹಿಂದೂ ಸಂಘಟನೆಗಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಹಾಗೂ ಸುಳ್ಳು ಆರೋಪ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಕಮಿಷನರ್ಗೆ ಮನವಿ ಸಲ್ಲಿಸಲು ವಿಎಚ್ಪಿ ಮುಂದಾಗಿದೆ. ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಸಂಘಟನೆಗಳ ವಿರುದ್ಧ “ಬೀಫ್ ಹೋಟೆಲ್ ಗಳಿಂದ ಹಫ್ತಾ /ಹಣ ಪಡೆಯಲಾಗುತ್ತಿದೆ” ಎಂಬ ಆಧಾರರಹಿತ ಹಾಗೂ ಸುಳ್ಳು ಆರೋಪಗಳನ್ನು ಮಾಡಿ, ಸಂಘಟನೆಯ ವರ್ಚಸ್ಸಿಗೆ ಧಕ್ಕೆ ತರುವ ಕುತಂತ್ರ ನಡೆಯುತ್ತಿದೆ. ಇಂತಹ ಅಪಪ್ರಚಾರಗಳನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹಿಂದೂ ಸಂಘಟನೆಯ ಮುಖಂಡರಾದ ಪ್ರದೀಪ್ ಸರಿಪಳ್ಳ ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯಾಸತ್ಯತೆ ಹೊರಬರಬೇಕಾದರೆ, ಪೊಲೀಸ್ ಇಲಾಖೆಯು ತಕ್ಷಣವೇ ಸೂಕ್ತ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇದಕ್ಕೆ ಸಂಬಂಧಿಸಿದಂತೆ ಪ್ರಮುಖ ಮೂರು ಆಗ್ರಹಗಳನ್ನು ಸಹ ಪಟ್ಟಿ ಮಾಡಿದೆ. ಆರೋಪ ಮಾಡಿದವರ ವಿಚಾರಣೆ: ಹಿಂದೂ ಸಂಘಟನೆಗಳ ಮೇಲೆ ಇಂತಹ ಗಂಭೀರ ಆರೋಪ ಮಾಡಿದ ವ್ಯಕ್ತಿಯನ್ನು ತಕ್ಷಣವೇ ಸುದೀರ್ಘ ತನಿಖೆಗೆ ಒಳಪಡಿಸಿ, ಸತ್ಯಾಂಶವನ್ನು ಸಾರ್ವಜನಿಕರ ಮುಂದೆ ತರಬೇಕು. ಅಕ್ರಮಗಳ ವಿರುದ್ಧ…
ತಮಿಳುನಾಡು: ನಟಿ ತ್ರಿಷಾ (Trisha) ಅವರನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ನಡುವೆಯೇ ತಮಿಳುನಾಡು (Tamil Nadu) ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ (Udayanidhi Stalin) ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಆಯೋಜಿಸಲಾಗಿದ್ದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ವಿಜಯ್ ಹಾಗೂ ತ್ರಿಷಾ ಕುರಿತು ಅಸಭ್ಯವಾಗಿ ಮಾತನಾಡಿದ್ದರು ಎಂದು ಟಿವಿಕೆ ಕಾರ್ಯಕರ್ತರು ದೂರು ನೀಡಿದ್ದರು. ಉದಯನಿಧಿ ಸ್ಟಾಲಿನ್ ಅವರು ಸಿಎಂ ಜೋಸೆಫ್ ವಿಜಯ್ ಹಾಗೂ ನಟಿ ತ್ರಿಷಾ ಅವರ ಹೆಸರನ್ನು ಪ್ರಸ್ತಾಪಿಸಿ ಡಬಲ್ ಮೀನಿಂಗ್ ಬರುವ ರೀತಿಯಲ್ಲಿ ಮಾತನಾಡಿದ್ದರು. “ತಮಿಳುನಾಡಿಗೆ ಕಾವೇರಿ ನೀರಿನ ಒಂದು ಹನಿಯೂ ಸಿಗದಿದ್ದರೂ ಮುಖ್ಯಮಂತ್ರಿ ವಿಜಯ್ ಅವರಿಗೆ ಅದರ ಬಗ್ಗೆ ಯಾವುದೇ ಕಾಳಜಿಯಿಲ್ಲ” ಎಂದು ಹೇಳುವಾಗ ಅಭಿಮಾನಿಯೊಬ್ಬ ನಟಿ ತ್ರಿಷಾ ಅವರ ಹೆಸರನ್ನು ಕೂಗಿದ್ದ. ಈ ವೇಳೆ ಸ್ಟಾಲಿನ್ ಅಸಭ್ಯವಾಗಿ ತ್ರಿಷಾ ಕುರಿತು ಮಾತನಾಡಿದ್ದಾರೆ ಎಂದು ಟಿವಿಕೆ ಆರೋಪಿಸಿತ್ತು. ಪ್ರತಿಭಟನೆಗಳು ಹಾಗೂ ಆಕ್ರೋಶದ ಬೆನ್ನಲ್ಲೇ,…
ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು; ಪ್ರಶಾಂತ್ ಕಿಶೋರ್ಗೆ ಭರ್ಜರಿ ಗೆಲುವು
ಜನ ಸುರಾಜ್ ಪಕ್ಷದ ಅಭ್ಯರ್ಥಿ ಪ್ರಶಾಂತ್ ಕಿಶೋರ್, ಬಿಜೆಪಿ ಭದ್ರಕೋಟೆಯಾಗಿದ್ದ ಬಂಕಿಪುರ ಉಪಚುನಾವಣೆ ಫಲಿತಾಂಶದಲ್ಲಿ 18000+ ಮತಗಳಿಂದ ಜಯಭೇರಿ ಬಾರಿಸಿದ್ದಾರೆ. ಏಪ್ರಿಲ್ನಲ್ಲಿ ರಾಜ್ಯಸಭೆಗೆ ಆಯ್ಕೆಯಾದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಈ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು. 29 ಸುತ್ತುಗಳ ಮತ ಎಣಿಕೆ ಅಂತ್ಯಕ್ಕೆ ಪಿಕೆ (PK) 61,075 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ನೀರಜ್ ಕುಮಾರ್ ಅವರಿಗಿಂತ 18,964 ಮತಗಳ ಮುನ್ನಡೆಯಲ್ಲಿದ್ದಾರೆ. ಕುಮಾರ್ 42,111 ಮತಗಳನ್ನು ಪಡೆದಿದ್ದರೆ, ಆರ್ಜೆಡಿ (RJD) ಅಭ್ಯರ್ಥಿ ರೇಖಾ ಕುಮಾರಿ 13,625 ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. 1995 ರಲ್ಲಿ ಪಾಟ್ನಾ ಪಶ್ಚಿಮ ಎಂದು ಕರೆಯಲ್ಪಡುತ್ತಿದ್ದಾಗಿನಿಂದ ಈ ವಿಧಾನಸಭಾ ಕ್ಷೇತ್ರದಲ್ಲಿ ಎಂದಿಗೂ ಸೋಲು ಕಾಣದ ಬಿಜೆಪಿಗೆ ಇಂದು ಸೋಲಿನ ರುಚಿಯನ್ನು ತಮ್ಮ ಮೊದಲ ಚುನಾವಣೆಯಲ್ಲಿಯೇ ಪ್ರಶಾಂತ್ ಕಿಶೋರ್ ನೀಡಿದ್ದಾರೆ. ಚುನಾವಣಾ ತಂತ್ರಜ್ಞ-ರಾಜಕಾರಣಿ ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೂ ಅವರು ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರಲಿಲ್ಲ.…
ಸಂಸತ್ತಿನಲ್ಲಿ ಹಿಂದೂ ಸಂಸ್ಕೃತಿ ಅವಹೇಳನ: ಕಾಂಗ್ರೆಸ್ ಪಕ್ಷವನ್ನು ದೇಶದ ಹಿಂದುಗಳು ಸಂಪೂರ್ಣ ತಿರಸ್ಕರಿಸಬೇಕು – ಶರಣ್ ಪಂಪ್ವೆಲ್
ಮಂಗಳೂರು: ಪ್ರಜಾಪ್ರಭುತ್ವದ ದೇಗುಲವಾದ ಸಂಸತ್ತಿನ ಆವರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲೇ ಸಾಧು-ಸಂತರ ವೇಷ ಧರಿಸಿ, ತ್ಯಾಗ ಮತ್ತು ಪವಿತ್ರತೆಯ ಸಂಕೇತವಾದ ಕಾವಿ ವಸ್ತ್ರವನ್ನು ಅಣಕಿಸಿರುವುದು ಸನಾತನ ಧರ್ಮ, ಸನಾತನ ಸಂಸ್ಕೃತಿ ಹಾಗೂ ಇಡೀ ಹಿಂದು ಸಮಾಜಕ್ಕೆ ಎಸಗಿದ ಘೋರ ಅಪಚಾರವಾಗಿದೆ ಎಂದು ಹಿಂದೂ ಮುಖಂಡ ಶರಣ್ ಪಂಪ್ವೆಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತರ ಮತ ಸಂಪ್ರದಾಯದ ಮೌಲ್ವಿಗಳ ಅಥವಾ ಧರ್ಮಗುರುಗಳ ವೇಷ ಧರಿಸಿ ಈ ರೀತಿ ರಸ್ತೆಯಲ್ಲಿ ನಾಟಕ ಮಾಡುವ ಧೈರ್ಯ ಕಾಂಗ್ರೆಸ್ ಹಾಗೂ ಅದರ ಮಿತ್ರಕೂಟಕ್ಕೆ ಇದೆಯೇ? ಹಿಂದು ಸಮಾಜದ ತಾಳ್ಮೆಯನ್ನು ದುರುಪಯೋಗಪಡಿಸಿಕೊಂಡು, ಸನಾತನ ಧರ್ಮ ಮತ್ತು ಪೂಜ್ಯ ಸಂತರನ್ನು ನಿರಂತರವಾಗಿ ಹಿಯಾಳಿಸುವುದೇ ಕಾಂಗ್ರೆಸ್ನ ಮುಖ್ಯ ಚಟುವಟಿಕೆಯಾಗಿದೆ ಎಂದು ಹಿಂದೂ ಮುಖಂಡ ಶರಣ್ ಪಂಪ್ವೆಲ್ ಹೇಳಿದ್ದಾರೆ. ರಾಜಕೀಯ ತೆವಲಿಗಾಗಿ ಕಾವಿ ಧರಿಸಿ ನಾಟಕವಾಡಿ ನಮ್ಮ ಪವಿತ್ರ ಸಂಸ್ಕೃತಿಗೆ ಅಪಮಾನ ಎಸಗಿರುವ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ತಕ್ಷಣವೇ ಇಡೀ ದೇಶದ ಸಾಧು-ಸಂತರಲ್ಲಿ ಹಾಗೂ ಹಿಂದು ಸಮಾಜದಲ್ಲಿ…
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ
ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಶ್ರೀ ಬಾಲಕೃಷ್ಣ ಗೌಡ ಅವರು ದಿನಾಂಕ 01.08.2026ರಂದು ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ, ಶಾಸಕ ಶ್ರೀ ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಒಟ್ಟು ರೂ.20 ಲಕ್ಷ ಪರಿಹಾರವನ್ನು ಮಂಜೂರು ಮಾಡುವ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚಿಸಿ, ಪ್ರಥಮ ಹಂತವಾಗಿ ರೂ.5 ಲಕ್ಷ ಪರಿಹಾರ ಧನದ ಚೆಕ್ ಅನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಯಿತು. ಉಳಿದ ರೂ.15 ಲಕ್ಷ ಪರಿಹಾರವನ್ನು ನೇರವಾಗಿ ಮೃತರ ವಾರೀಸುದಾರರ ಬ್ಯಾಂಕ್ ಖಾತೆಗೆ ಜಮಾ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕ ಶ್ರೀ ಹರೀಶ್ ಪೂಂಜ ಅವರು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ (DFO) ರವಿಶಂಕರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಸುಬ್ಬಯ್ಯ ನಾಯ್ಕ, ವಲಯ ಅರಣ್ಯಾಧಿಕಾರಿ (RFO), ತಹಶೀಲ್ದಾರ್ ಎಸ್.ಎನ್. ನರಗುಂದ…
ಹಿಂದೂ ಧರ್ಮದ ಅಪಮಾನ ಮಾಡುವ ವಿವಾದಿತ ಕಾಮಿಡಿಯನ್ ಕುನಾಲ್ ಕಮ್ರಾ ಅವರ ಆಗಸ್ಟ್ 3ರಂದು ನಡೆಯಬೇಕಿದ್ದ ಕಾಮಿಡಿ ಶೋ, ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವೈಟ್ಫೀಲ್ಡ್ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ ಬಳಿಕ ರದ್ದು ಮಾಡಲಾಗಿದೆ. ಇದು ಹಿಂದೂ ಸಮಾಜದ ಜಾಗೃತಿ, ಸಂಘಟಿತ ಶಕ್ತಿ ಮತ್ತು ಏಕತೆಯ ವಿಜಯವಾಗಿದೆ. ಹಿಂದೂ ಧರ್ಮದ ಅವಮಾನವನ್ನು ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶ ಇಂದು ಮತ್ತೊಮ್ಮೆ ಮೂಡಿಬಂದಿದೆ. ಈ ಹೋರಾಟದಲ್ಲಿ ಸಹಕರಿಸಿದ ಎಲ್ಲಾ ಹಿಂದೂ ಸಂಘಟನೆಗಳಿಗೆ, ಕಾರ್ಯಕರ್ತರಿಗೆ, ಭಕ್ತರಿಗೆ ಹಾಗೂ ಪೊಲೀಸ್ ಇಲಾಖೆಗೆ ಧನ್ಯವಾದಗಳು ಎಂದು ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. ಪಟ್ಟಂದೂರು ಅಗ್ರಹಾರದ ಉರು ವೈಟ್ಫೀಲ್ಡ್ ರೆಸ್ಟೋರೆಂಟ್ನಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮವನ್ನ ಕಾನೂನು ಮತ್ತು ಸುವ್ಯವಸ್ಥೆ, ಸಾರ್ವಜನಿಕ ಶಾಂತಿ ಹಾಗೂ ಧಾರ್ಮಿಕ ಸಾಮರಸ್ಯದ ಹಿತದೃಷ್ಟಿಯಿಂದ ರದ್ದುಗೊಳಿಸುವಂತೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಆಗ್ರಹಿಸಿತ್ತು. 2021ರಲ್ಲೂ ಸಹ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಅವರ ಕಾಮಿಡಿ ಕಾರ್ಯಕ್ರಮವನ್ನು ವ್ಯಾಪಕ ವಿರೋಧದ ಕಾರಣದಿಂದ ರದ್ದುಗೊಳಿಸಲಾಗಿತ್ತು.
