Author: admin
ಬೆಂಗಳೂರಿನಲ್ಲಿ ಡ್ರೈವರ್ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಹೊಸಕಾಡು ನಿವಾಸಿ ಅಶೋಕ್ ರವರು ಕಳೆದ 3 ತಿಂಗಳಿನಿಂದ ಹೃದಯ ಸಂಬಂಧಿ ರೋಗದಿಂದ ಬಳಲುತ್ತಿದ್ದು, ಶುಶ್ರೂಷೆ ನಡೆಯುತ್ತಿದೆ. ಹೃದಯದಲ್ಲಿ ಸ್ಟಂಟ್ ಅಳವಡಿಸಿದ ಕಾರಣ ದುಡಿಯಲು ಸಾಧ್ಯವಾಗದೆ ಹಾಸಿಗೆ ಹಿಡಿದಿದ್ದು, ಆರ್ಥಿಕ ಸಮಸ್ಯೆ ತಲೆದೋರಿದ ಕಾರಣ ಅಶೋಕ್ ರವರ ಶ್ರೀಮತಿಯವರ ಮನವಿಯ ಮೇರೆಗೆ ಶಿವಾಯ ಫೌಂಡೇಶನ್ ವತಿಯಿಂದ 25,000 ರೂಪಾಯಿಗಳ ಧನಸಹಾಯ ಮಾಡಲಾಯಿತು. ಈ ಸಂಧರ್ಭ ಶಿವಾಯ ಫೌಂಡೇಶನ್ ನ ಗೌರವಾಧ್ಯಕ್ಷ ನವೀನ್ ಚಂದ್ರ ಜೆ ಶೆಟ್ಟಿ, ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಪಲಿಮಾರು ಮತ್ತಿತರರು ಉಪಸ್ಥಿತರಿದ್ದರು.
ಮುಲ್ಕಿ ಸುಂದರ್ ರಾಮ ಶೆಟ್ಟಿ ಕನ್ವೆನ್ಷನ್ ಸೆಂಟರ್ ನಲ್ಲಿ ಸ್ಯಾಂಡಿಸ್ ಕಂಪನಿಯ ಆಶ್ರಯದಲ್ಲಿ ನಡೆದ ಕೋಸ್ಟಲ್ ಫಿಲಂ ಅವಾಡ್ಸ್೯ ನಲ್ಲಿ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನ ‘ಜೈ’ ತುಳು ಸಿನಿಮಾದಲ್ಲಿ ಅಕ್ಷರ್ ಜೆ ಶೆಟ್ಟಿಯ ಅಭಿನಯಕ್ಕಾಗಿ ಬಾಲನಟ ಪ್ರಶಸ್ತಿ ಲಭಿಸಿದೆ. ಕ್ರೀಡೆಯಲ್ಲೂ ಸಾಧನೆ ಮಾಡುತ್ತಿರುವ ಅಕ್ಷರ್ ಜೆ ಶೆಟ್ಟಿ ಹಿರಿಯ ಪತ್ರಕರ್ತ ಹಾಗೂ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾದ ಜಗನ್ನಾಥ ಶೆಟ್ಟಿ ಬಾಳ ಅವರ ಸುಪುತ್ರ.
ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿಯ ನಿಕಟಪೂರ್ವ ಸಂಚಾಲಕರಾದ ನ್ಯಾಯವಾದಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಕುಂಬ್ರ ದುರ್ಗಾಪ್ರಸಾದ್ ರೈ ಅವರಿಗೆ ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಹಾಗೂ ಪುತ್ತೂರು ತಾಲೂಕು ಬಂಟರ ಸಂಘದ ವತಿಯಿಂದ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಚಾವಡಿ ಸಮ್ಮಾನವನ್ನು ಮಾಡಿ ಗೌರವಿಸಲಾಯಿತು. ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷರಾಗಿರುವ ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅವರು ಕುಂಬ್ರ ದುರ್ಗಾಪ್ರಸಾದ್ ರೈ ಅವರನ್ನು ಸನ್ಮಾನಿಸಿ ಮಾತನಾಡಿ, ದುರ್ಗಾಪ್ರಸಾದ್ ರೈಯವರು ಬಹುಮುಖ ಪ್ರತಿಭೆ ಉಳ್ಳವರು, ಸಂಘಟನಾ ಚತುರತೆಯನ್ನು ಹೊಂದಿದವರು, ನ್ಯಾಯವಾದಿಯಾಗಿ ತುಳು ಅಕಾಡೆಮಿ ಸದಸ್ಯರಾಗಿ ಹೆಸರನ್ನು ಪಡೆದಿದ್ದಾರೆ. ಇವರು ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕರಾಗಿ ಉತ್ತಮ ಸೇವೆಯನ್ನು ನೀಡಿದ್ದಾರೆ. ಇವರ ಸಂಘಟನಾ ಶಕ್ತಿ ನಮಗೆ ಇನ್ನೂ ಬೇಕು. ಇವರು ಮುಂದೆಯೂ…
ಮಂಗಳೂರು(reporterkarnataka.com): ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರು ಕಳೆದ ವರ್ಷ ನವರಾತ್ರಿ ಸಂದರ್ಭದಲ್ಲಿ ನೀಡಿದ್ದ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಅದೇನೆಂದರೆ 2026ರಲ್ಲಿ ತನ್ನ ನೆಚ್ಚಿನ ನಾಯಕ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಭವಿಷ್ಯವಾಣಿ ನುಡಿದಿದ್ದರು. ಆ ವೀಡಿಯೊ ಇದೀಗ ವೈರಲ್ ಆಗುತ್ತಿದೆ. ಮಿಥುನ್ ಹೇಳಿದ್ದು ನಿಜವಾಯಿತು ಎಂಬ ಚರ್ಚೆ ಕರಾವಳಿ ಭಾಗದಲ್ಲಿ ಈಗ ಬಿರುಸಾಗಿ ನಡೆಯುತ್ತಿದೆ.
ಕರಾವಳಿ ಬೆಡಗಿ ನಟಿ ಶುಭಾ ಪೂಂಜಾ-ಸುಮಂತ್ ದಾಂಪತ್ಯದಲ್ಲಿ ಬಿರುಕು: ಡಿವೋರ್ಸ್ ಕೋರಿ ಫ್ಯಾಮಿಲಿ ಕೋರ್ಟ್ ಗೆ ಮೊರೆ
ಬೆಂಗಳೂರು(reporterkarnataka.com): ಕನ್ನಡ ಚಿತ್ರರಂಗದ ಖ್ಯಾತ ನಟಿ, ‘ಬಿಗ್ ಬಾಸ್’ ಖ್ಯಾತಿಯ ಶುಭಾ ಪೂಂಜಾ ಅವರ ವೈವಾಹಿಕ ಬದುಕು ಮದುವೆಯಾದ ನಾಲ್ಕೇ ವರ್ಷಕ್ಕೆ ಮುರಿದು ಬೀಳುವ ಸೂಚನೆ ಸಿಕ್ಕಿದೆ. ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಕನ್ನಡದ ‘ಮೊಗ್ಗಿನ ಮನಸು’ ಸೇರಿದಂತೆ ಹಲವು ಸಿನಿಮಾಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಶುಭಾ ಪೂಂಜಾ, ಉದ್ಯಮಿ ಸುಮಂತ್ ಬಿಲ್ಲವ ಅವರನ್ನು ಪ್ರೀತಿಸಿ 2022ರ ಜನವರಿಯಲ್ಲಿ ಮದುವೆಯಾಗಿದ್ದರು. ಮದುವೆಯಾದ ಬಳಿಕ ಈ ದಂಪತಿ ಅತ್ಯಂತ ಖುಷಿ ಖುಷಿಯಾಗಿಯೇ ಕಾಲ ಕಳೆದಿದ್ದರು. ಆದರೆ, ಈಗ ಏಕಾಏಕಿ ಬೇರೆ ಆಗಲು ಮುಂದಾಗಿರೋದು ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ.
ತಡರಾತ್ರಿ ಸರ್ಕಾರಿ ಆಸ್ಪತ್ರೆಗೆ ಯು.ಟಿ. ಖಾದರ್ ಭೇಟಿ: ಗರ್ಭಿಣಿಯನ್ನ ನೆಲದ ಮೇಲೆ ಕೂರಿಸಿದ್ದ ಕಂಡು ಆರೋಗ್ಯ ಸಚಿವ ಕೆಂಡಾಮಂಡಲ
ಬೆಂಗಳೂರು(reporterkarnataka.com): ನೂತನ ಸಚಿವರಿಗೆ ಖಾತೆ ಹಂಚಿಕೆಯಾಗ್ತಿದ್ದಂತೆ ಫುಲ್ ಅಲರ್ಟ್ ಆಗಿದ್ದಾರೆ. ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು ಟಿ ಖಾದರ್ ಅವರು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ಕೊಟ್ಟಿದ್ದಾರೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಜಯನಗರ ಜನರಲ್ ಆಸ್ಪತ್ರೆಗೆ ಭೇಟಿ ನೀಡಿದ ಯುಟಿ ಖಾದರ್ ಅವರು, ಆಸ್ಪತ್ರೆ ಸಿಬ್ಬಂದಿ ಬಗ್ಗೆ ಪರಿಶೀಲನೆ, ಸ್ವಚ್ಛತೆ, ರೋಗಿಗಳಿಗೆ ಚಿಕಿತ್ಸೆ ವಿಧಾನ, ತುರ್ತು ಚಿಕಿತ್ಸಾ ಘಟಕದಲ್ಲಿ ಪರಿಶೀಲನೆ ನಡೆಸಿದ್ದಾರೆ. *ಸಿಬ್ಬಂದಿಗಳಿಗೆ ಚಾಟಿ ಬೀಸಿದ ಖಾದರ್:* ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆ ಪರಿಶೀಲನೆ ನೂತನ ಸಚಿವ ಖಾದರ್ ಇಳಿದಿದ್ದಾರೆ. ಹಾಜರಾತಿಯಲ್ಲಿ ಗೈರಾಗಿರುವ ಸಿಬ್ಬಂದಿಗಳಿಗೆ ಖಾದರ್ ಚಾಟಿ ಬೀಸಿದ್ದಾರೆ. ಅಲ್ಲದೇ ರೋಗಿಗಳ ಬಳಿಯೂ ತೆರಳಿ ಸಚಿವ ಖಾದರ್ ಮಾಹಿತಿ ನೀಡಿದ್ದಾರೆ. ತಡರಾತ್ರಿ ಆಸ್ಪತ್ರೆ ಆವರಣದಲ್ಲಿದ್ದ ಪ್ರತಿಯೊಬ್ಬರಿಂದಲೂ ಖಾದರ್ ಮಾಹಿತಿ ಪಡೆದಿದ್ದಾರೆ
ಬೆಂಗಳೂರು: ರಾಮಲಿಂಗಾರೆಡ್ಡಿ (Ramalinga Reddy) ಅವರ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡು ರಾಜ್ಯ ಬಿಜೆಪಿ (BJP) ಸಾಮಾಜಿಕ ಜಾಲತಾಣದಲ್ಲಿ ಲೇವಡಿ ಮಾಡಿದೆ. ಕಾಂಗ್ರೆಸ್ ಆಂತರಿಕ ಬಿಕ್ಕಟ್ಟನ್ನು ಲೇವಡಿ ಮಾಡಿರುವ ಬಿಜೆಪಿ, “ಪಿಚ್ಚರ್ ಅಭಿ ಬಾಕಿ ಹೈ..! ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ರಾಮಲಿಂಗಾ ರೆಡ್ಡಿ ಅವರು ಇಂಟರ್ವೆಲ್ ಸಿಎಂ ಡಿಕೆಶಿವಕುಮಾರ್ ಅವರ ಅವಧಿಯಲ್ಲೂ ಕಿತ್ತಾಟ ಮುಂದುವರಿಯಲಿದೆ ಎಂಬ ದೊಡ್ಡ ಸಂದೇಶ ರವಾನಿಸಿದಂತಿದೆ” ಎಂದು ಟೀಕಿಸಿದೆ.
To understand the new smart watches and other pro devices of recent focus, we should look to Silicon Valley and the quantified movement of the latest generation. Apple’s Watch records exercise, tracks our moves throughout the day, assesses the amount of time we are stood up and reminds us to get up and move around if we have been sat for too long – let’s not forget Tim Cook’s “sitting is the new factor” line. Diana saves Steve Trevor who has crashed on Themyscira. He warns her of the great war, World War I, raging across the globe. Wonder Woman…
Jungfrau A. Bietschhorn This region is a magnificent area with high mountain ranges, glaciers and is actually the most glaciated part of the European Alps. Visiting this area can be done relatively easy by car and if you want to go up, by train up to 3,400 metres above sea level, the highest train ride in Europe, the Jungfrau Railway is very impressive (and expensive!). The area is on the UNESCO World Heritage list because of its unique and wide range of flora and fauna and geological importance regarding the creating of the High Alps.
To understand the new smart watches and other pro devices of recent focus, we should look to Silicon Valley and the quantified movement of the latest generation. Apple’s Watch records exercise, tracks our moves throughout the day, assesses the amount of time we are stood up and reminds us to get up and move around if we have been sat for too long – let’s not forget Tim Cook’s “sitting is the new factor” line. Diana saves Steve Trevor who has crashed on Themyscira. He warns her of the great war, World War I, raging across the globe. Wonder Woman…
