Author: admin

ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲೆಂದೇ ವಿಧಾನಪರಿಷತ್​​ ಚುನಾವಣೆಯಲ್ಲಿ ಕೆಲ ಬಿಜೆಪಿ ಶಾಸಕರು ಅಡ್ಡಮತದಾನ ಮಾಡಿ ವಿಜಯೇಂದ್ರ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಇದರ ಮಧ್ಯೆ ಇದೀಗ ಮಾಜಿ ಸಿಎಂ ಡಿವಿ ಸದಾನಂದಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಬಿಜೆಪಿಯಲ್ಲಿ ಅಲ್ಲೊಲ ಕಲ್ಲೋಲ ಸೃಷ್ಟಿಸಿದೆ. ಆಡಿಯೋದಲ್ಲಿ ಏನೇನಿದೆ? “ನಾನು ಹೇಳುತ್ತಿರುವುದು ಸರಿಯೋ ತಪ್ಪೋ ನೀವೇ ಹೇಳಿ. ವಿಜಯೇಂದ್ರ ಅವರು 3 ವರ್ಷಗಳ ಅಧ್ಯಕ್ಷ ಅವಧಿಯನ್ನು ಮುಗಿಸುತ್ತಿದ್ದಾರೆ.” “ನವೆಂಬರ್‌ನಲ್ಲಿ ಅವರ ಅಧ್ಯಕ್ಷ ಅವಧಿ ಮುಗಿಯುತ್ತದೆ. ಇನ್ನು 2-3 ತಿಂಗಳಿಗೆ ಏಕೆ ಗೊಂದಲ ಸೃಷ್ಟಿಸಬೇಕು?”…“ಈ ಸಮಯದಲ್ಲಿ ವಿಜಯೇಂದ್ರ ಅವರ ಟೀಮ್‌ನಲ್ಲಿ ಗೊಂದಲ ಸೃಷ್ಟಿಸಬೇಕು. 2 ತಿಂಗಳು ಸ್ಮೂತ್ ಆಗಿ ಮುಂದುವರಿಸಿ, ಬಳಿಕ ಹೊರಗೆ ಕಳಿಸಿ.” “ಅವಧಿ ಮುಗಿದ ನಂತರ ಅವರನ್ನು ಕೆಳಗಿಳಿಸಿದರೆ ಯಾರೂ ದೂಷಿಸುವುದಿಲ್ಲ. ಪಕ್ಷದೊಳಗೆ ಗೊಂದಲವಾಗುವುದಿಲ್ಲ.” “ಜುಲೈ, ಆಗಸ್ಟ್, ಸೆಪ್ಟೆಂಬರ್ ವರೆಗೂ ಇರಲಿ. ಅಕ್ಟೋಬರ್‌ನಲ್ಲಿ ಅವರನ್ನು ‘ಕಿಕ್ ಔಟ್’ ಮಾಡಿ.” “ಈಗಲೇ ಹೊರಗೆ ಕಳಿಸಿದರೆ ಅವರ ಪರವಾದ ಟೀಮ್ ನಿಮ್ಮ…

Read More

ರಾಮ ಮಂದಿರ ದೇಣಿಗೆ (Ayodhya Ram Mandir) ಕದ್ದವರ ಪರ ವಕೀಲರು ವಕಾಲತ್ತು ವಹಿಸುವುದಿಲ್ಲ ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಘೋಷಿಸಿದೆ. ಅಲ್ಲದೇ ಯಾರಾದರೂ ವಕೀಲರು ಆರೋಪಿಗಳ ಪರ ವಕಾಲತ್ತು ವಹಿಸಿದರೆ ಅವರಿಗೆ 5 ಲಕ್ಷ ರೂ. ದಂಡ ವಿಧಿಸುವುದಾಗಿ ಅಯೋಧ್ಯೆ ಬಾರ್ ಅಸೋಸಿಯೇಷನ್ ಖಡಕ್ ಎಚ್ಚರಿಕೆ ನೀಡಿದೆ. ಅಯೋಧ್ಯೆ ಬಾರ್ ಅಸೋಸಿಯೇಷನ್ ​​ಅಧ್ಯಕ್ಷ ಕಾಳಿಕಾ ಪ್ರಸಾದ್ ಮಿಶ್ರಾ ಅವರ ನೇತೃತ್ವದಲ್ಲಿ ನಡೆದ ಫೈಜಾಬಾದ್ ವಕೀಲರ ಸಂಘದ ಸಭೆಯಲ್ಲಿ ಈ ಘೋಷಣೆ ಮಾಡಲಾಗಿದೆ. ಈ ಪ್ರಕರಣದ ಆರೋಪಿಗಳ ಪರವಾಗಿ ಯಾವ ವಕೀಲರು ವಕಾಲತ್ತು ವಹಿಸುವುದಿಲ್ಲ. ಯಾರಾದರೂ ವಕಾಲತ್ತು ವಹಿಸಿದರೆ ಅವರಿಗೆ 5 ಲಕ್ಷ ರೂ. ದಂಡ ವಿಧಿಸಲಾಗುತ್ತದೆ ಎಂದು ಕಾಳಿಕಾ ಪ್ರಸಾದ್ ಘೋಷಿಸಿದ್ದಾರೆ ಕೆಲವರ ಈ ಕೃತ್ಯದಿಂದ, ಇಡೀ ಅಯೋಧ್ಯೆ ನಿವಾಸಿಗಳಿಗೆ ಕೆಟ್ಟ ಹೆಸರು ಬಂದಿದೆ. ಬುಲ್ಲೋಜರ್ ನೀತಿಯನ್ನು ಅನುಸರಿಸುವ ಮೂಲಕ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಹಿರಿಯ ವಕೀಲ ರಾಜೇಂದ್ರ ಚೌಧರಿ ಒತ್ತಾಯಿಸಿದ್ದಾರೆ. ಸದ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಂಟು…

Read More

ಮೊಹರಂ ಮೆರವಣಿಗೆಯ ಸಂದರ್ಭದಲ್ಲಿ ರ‍್ಯಾಟ್‌ ಪಾಯಿಸನ್‌ (ಇಲಿ ಪಾಷಾಣ – Rodenticide) ತುಂಬಿದ ಕ್ಯಾಪ್ಸೂಲ್ ಗಳನ್ನು ವಿತರಿಸಲು ಮುಂದಾಗಿದ್ದ ವ್ಯಕ್ತಿಯೊಬ್ಬನನ್ನ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನ ಪುಣೆ ನಿವಾಸಿ, ಬಣ್ಣದ ವ್ಯಾಪಾರಿ ಫಯಾಜ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಸುಮಾರು 14,900 ವಿಷ ತುಂಬಿದ ಕ್ಯಾಪ್ಸೂಲ್ ಗಳನ್ನ ವಶಪಡಿಸಿಕೊಂಡಿದ್ದು, ಘಟನೆ ಹಿಂದೆ ದೊಡ್ಡ ಪಿತೂರಿಯೇ ಇದೆ ಎಂದು ಶಂಕಿಸಲಾಗಿದೆ. 15 ಸಾವಿರ ಜನರನ್ನು ಕೊಲ್ಲುವ ಉದ್ದೇಶದೊಂದಿಗೆ ಈ ವಿಷಕಾರಿ ಮಾತ್ರೆ ಹಂಚುತ್ತಿದ್ದೆ ಎಂಬ ಸತ್ಯವನ್ನು ಬಾಯ್ಬಿಟ್ಟಿದ್ದಾನೆ. ಫಯಾಜ್‌ ನೀಡಿದ್ದ ಮಾತ್ರೆ ಸೇವಿಸಿದ್ದ ಸುಮಾರು 11 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜನಸಂದಣಿಯ ಲಾಭ ಪಡೆದು, ಅವುಗಳನ್ನು ನೋವು ನಿವಾರಕಗಳು ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿಸುವ ಔಷಧಿಗಳೆಂದು ಹೇಳಿ ಮಾರಾಟ ಮಾಡುತ್ತಿದ್ದ. ಪೊಲೀಸರು ಸಕಾಲದಲ್ಲಿ ಆತನನ್ನು ಬಂಧಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ” ಆರೋಪಿ ಫಯಾಜ್‌ 30,000 ಖಾಲಿ ಕ್ಯಾಪ್ಸುಲ್‌ಗಳು ಮತ್ತು 50 ಕೆಜಿ ಫಾಸ್ಫರಸ್‌ಗೆ ಆರ್ಡರ್‌‌ ಮಾಡಿದ್ದ ಎಂದು ಮುಂಬೈ ಪೊಲೀಸ್ ಡಿಸಿಪಿ (ಕೇಂದ್ರ ವಲಯ-I) ಜಯಂತ್…

Read More

ಉಪ್ಪಳ: ರೋಗಬಾಧೆಯಿಂದಾಗಿ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾದ ವ್ಯಕ್ತಿಯ ಮೃತದೇಹವನ್ನು ಇಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಮುಸ್ಲಿಂ ಲೀಗ್ ಮತ್ತು ಮುಸ್ಲಿಂ ಲೀಗ್‌ನ ಜನಪ್ರತಿನಿಧಿಗಳು ನಡೆಸುತ್ತಿರುವ ಪ್ರಯತ್ನ ಅತ್ಯಂತ ಖಂಡನೀಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ. ಎಲ್. ಅಶ್ವಿನಿ ತಿಳಿಸಿದ್ದಾರೆ. ಆರ್ಥಿಕವಾಗಿ ಹಿಂದುಳಿದಿರುವ ಆ ಕುಟುಂಬಕ್ಕೆ ಅಂತ್ಯಸಂಸ್ಕಾರದ ವೆಚ್ಚವನ್ನು ಭರಿಸಲು ಸಾಧ್ಯವಿರಲಿಲ್ಲ. ಹಾಗಾಗಿಯೇ ಕುಟುಂಬದ ಸದಸ್ಯರು ಅಂತ್ಯಸಂಸ್ಕಾರದ ಜವಾಬ್ದಾರಿಯನ್ನು ಜನಪ್ರತಿನಿಧಿಗಳಿಗೆ ಒಪ್ಪಿಸಿದ್ದರು. ಅವರ ಭೌತಿಕ ಶರೀರದ ಅಂತ್ಯಸಂಸ್ಕಾರದ ವೆಚ್ಚವನ್ನು ಭರಿಸಿ, ವಿಧಿವಿಧಾನಗಳ ನೇತೃತ್ವ ವಹಿಸಿದ್ದು ಸೇವಾ ಭಾರತಿ ಸಂಸ್ಥೆಯಾಗಿದೆ. ಸತ್ಯ ಹೀಗಿರುವಾಗ, ಅಂತ್ಯಸಂಸ್ಕಾರದ ಚಿತ್ರಗಳನ್ನು ತೆಗೆದುಕೊಂಡು ಇದರ ಸಂಪೂರ್ಣ ಜವಾಬ್ದಾರಿಯನ್ನು ನಾವೇ ವಹಿಸಿಕೊಂಡಿದ್ದೇವೆ ಎಂಬಂತೆ ಲೀಗ್ ನಾಯಕರು ಮತ್ತು ಜನಪ್ರತಿನಿಧಿಗಳು ನೀಡಿರುವ ಹೇಳಿಕೆಗಳು ಹಾಗೂ ಪ್ರಕಟಣೆಗಳು ಸತ್ಯಕ್ಕೆ ದೂರವಾಗಿವೆ. ಅನಾಥವಾದ ಅಥವಾ ಉಪೇಕ್ಷಿಸಲ್ಪಟ್ಟ ಮೃತದೇಹಗಳ ಅಂತ್ಯಸಂಸ್ಕಾರ ಮಾಡುವುದು ಜನಪ್ರತಿನಿಧಿಗಳ ಜವಾಬ್ದಾರಿಯಾಗಿದೆ. ಪರಿಸ್ಥಿತಿ ಹೀಗಿರುವಾಗ ತಪ್ಪು ಮಾಹಿತಿಯನ್ನು ಹರಡಿ ಹಿಂದೂ ಸಮಾಜವನ್ನು ಒಡೆಯಲು ಮತ್ತು ಬಡ ಕುಟುಂಬದ ದಯನೀಯ ಸ್ಥಿತಿಯ ದುರುಪಯೋಗ…

Read More

ಬೆಳ್ತಂಗಡಿ :ಜೂ. 26 ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಶಾಸಕರಾದ ಶ್ರೀ ಹರೀಶ್ ಪೂಂಜರವರ ನೇತೃತ್ವದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಸಾರ್ವಜನಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ಉತ್ತೀರ್ಣರಾದ ಬೆಳ್ತಂಗಡಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ “ಶ್ರಮಿಕ ಪ್ರತಿಭಾ ವಿದ್ಯಾರ್ಥಿ” ಸನ್ಮಾನ ಕಾರ್ಯಕ್ರಮವನ್ನು ಜೂನ್ 28, ಭಾನುವಾರ ಮೂರು ಕೇಂದ್ರಗಳಲ್ಲಿ ಆಯೋಜಿಸಲಾಗಿದೆ. 1. ಪೂರ್ವಾಹ್ನ: 9.00 – ಸ್ವರಾಜ್ ಟವರ್ಸ್ ಸಭಾಭವನ ಅಳದಂಗಡಿ (ಅಳದಂಗಡಿ ಮತ್ತು ನಾರಾವಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ – ಗ್ರಾಮಗಳು: ಬಡಗಕಾರಂದೂರು, ಪಿಲ್ಯ, ಸುಲ್ಕೇರಿಮೊಗ್ರು, ಸುಲ್ಕೇರಿ, ನಾವರ, ಕುದ್ಯಾಡಿ, ಬಳೆಂಜ, ನಾಲ್ಕೂರು, ತೆಂಕಕಾರಂದೂರು, ಗರ್ಡಾಡಿ, ಪಡಂಗಡಿ, ಕುಕ್ಕೇಡಿ, ನಿಟ್ಟಡೆ, ಮೇಲಂತಬೆಟ್ಟು, ಸವಣಾಲು, ಮುಂಡೂರು, ಶಿರ್ಲಾಲು, ಕರಂಬಾರು, ನಾರಾವಿ, ಕುತ್ಲೂರು, ಸಾವ್ಯ, ಅಂಡಿಂಜೆ, ಕೊಕ್ರಾಡಿ, ಕಾಶಿಪಟ್ನ, ಮರೋಡಿ, ಪೆರಾಡಿ, ಹೊಸಂಗಡಿ, ಬಡಕೋಡಿ, ಆರಂಬೋಡಿ, ಗುಂಡೂರಿ, ಬಜಿರೆ, ಕರಿಮಣೇಲು, ಮೂಡುಕೋಡಿ, ವೇಣೂರು) 2. ಪೂರ್ವಾಹ್ನ: 11.30 – ಸಂಗಮ ಸಭಾಭವನ, ಲಾಯಿಲ (ಕಣಿಯೂರು, ಕುವೆಟ್ಟು…

Read More

ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ವಿಠ್ಠಲ್ ಗೌಡನಿಗೆ ಬೆಂಗಳೂರಿನ 6ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಬಂಧನ ವಾರಂಟ್ ಜಾರಿಗೊಳಿಸಿದೆ. ಜೂನ್ 8 ರಂದೇ ಈ ವಾರಂಟ್ ಜಾರಿಯಾಗಿದ್ದು, ಮುಂಬರುವ ಜೂನ್ 30 ರೊಳಗೆ ವಿಠ್ಠಲ್ ಗೌಡನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಆದೇಶ ನೀಡಲಾಗಿದೆ. ನ್ಯಾಯಾಲಯದ ಅರೆಸ್ಟ್​​ ವಾರಂಟ್ ಕೈಸೇರುತ್ತಿದ್ದಂತೆ ವಿಠ್ಠಲ್ ಗೌಡ ನಾಪತ್ತೆಯಾಗಿದ್ದು, ಬೆಳ್ತಂಗಡಿ ಮತ್ತು ಧರ್ಮಸ್ಥಳ ಭಾಗದ ವಿವಿಧೆಡೆ ಅಧಿಕಾರಿಗಳ ತಂಡ ಬೀಡುಬಿಟ್ಟಿದ್ದು, ಶೋಧ ಕಾರ್ಯ ಚುರುಕುಗೊಳಿಸಿದೆ. ವಿಠ್ಠಲ್ ಗೌಡನ ಸ್ವಗೃಹ ಆತನ ಸಹೋದರಿ ಕುಸುಮಾವತಿ ಅವರ ನಿವಾಸ ಹಾಗೂ ಪ್ರಮುಖವಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸದಲ್ಲಿಯೂ ಪೊಲೀಸರು ತಪಾಸಣೆ ನಡೆಸಿದ್ದಾರೆ. ವಿಠ್ಠಲ್ ಗೌಡ ನ್ಯಾಯಾಲಯದ ಅಧಿಕೃತ ಆದೇಶವನ್ನು ಬಹಿರಂಗವಾಗಿ ಉಲ್ಲಂಘಿಸಿ, ನಿಯಮಾವಳಿಗಳನ್ನು ಗಾಳಿಗೆ ತೂರಿ ಮತ್ತೆ ಅವಹೇಳಕಾರಿ ಹೇಳಿಕೆಯನ್ನು ನೀಡುವುದನ್ನು…

Read More

ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಅಧಿಕೃತ ಲೋಗೋ ಬಳಸಿ, ಟ್ರಸ್ಟಿನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯನ್ನು ಹಂಚಿದ ಇಬ್ಬರು ವ್ಯಕ್ತಿಗಳ ವಿರುದ್ಧ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ‌. ದೂರಿನಲ್ಲಿ ಏನಿದೆ? ಅರುಣ್ ಕುಮಾರ್ ಪುತ್ತಿಲರು ಕಳೆದ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಸುಮಾರು 62.458 ಮತ ಪಡೆದು 2 ನೇ ಸ್ಥಾನ ಪಡೆದಿರುವ ಇವರ ಬಗ್ಗೆ ಫೇಸ್ ಬುಕ್ ನಲ್ಲಿ ಶರತ್ ಗೌಡ ಎಂಬ ವ್ಯಕ್ತಿ ಹೆಸರಿನಲ್ಲಿ ಆರುಣ್ ಕುಮಾರ್ ಪುತ್ತಿಲ ಅವರ ಫೋಟೋ ಹಾಕಿ ಮತ್ತು ಪುತ್ತಿಲ ಪರಿವಾರ ಟ್ರಸ್ಟ್ ನ ಲೋಗೋ ಹಾಕಿ ದಿನಾಂಕ: 18-06-2026 ರಂದು ಕಣ ಕಣದಲ್ಲೂ ಕೇಸರಿ.. ಅಣ್ಣನಿಗೆ ಜೈ.. ಎಂದು ಹಾಗೂ ಫೋಟೋದಲ್ಲಿ ನಮ್ಮ ಮೊದಲ ಆದ್ಯತೆ ದುಡ್ಡು ನಮ್ಮ ಕೊನೆಯ ಆದ್ಯತೆಯೂ ದುಡ್ಡು ಮಾಡುವುದು… ಎಂದು ಹಾಗೂ ಫೋಟೋದ ಹಿಂಭಾಗದಲ್ಲಿ ದೇವಸ್ಥಾನದ ಫೋಟೋ ಹಾಗೂ ತ್ರಿಶೂಲ ಶಂಖ ವನ್ನು ಚಿತ್ರಿಸಿ ಪೋಸ್ಟ್ ಮಾಡಿರುತ್ತಾರೆ. ಈ ಪೋಸ್ಟ್…

Read More

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ದೇಣಿಗೆ ಮತ್ತು ಕಾಣಿಕೆ ಹಣದ ಕಳ್ಳತನಕ್ಕೆ ಸಂಬಂಧಿಸಿದಂತೆ ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಆಪ್ತ ಸಹಾಯಕ (PA) ಟಿನ್ನು ಯಾದವ್ ಸೇರಿದಂತೆ ಎಂಟು ಜನರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ, ಟ್ರಸ್ಟ್‌ನ ಇಬ್ಬರು ಪ್ರಮುಖ ಉನ್ನತ ಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಪ್ರಮುಖ ಸದಸ್ಯರಾದ ಅನಿಲ್ ಮಿಶ್ರಾ ಕೂಡ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಈ ಘಟನೆಯು ವಿರೋಧ ಪಕ್ಷಗಳ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದ್ದು, ಮುಂಬರುವ ಯುಪಿ ಚುನಾವಣೆಯ ಮೇಲೆ ಪರಿಣಾಮ ಬೀರಬಹುದು. ಬಂಧಿತ ಆರೋಪಿಗಳೆಲ್ಲರೂ ದೇವಸ್ಥಾನದ ಕಾಣಿಕೆ ಮತ್ತು ನಗದು ಹಣವನ್ನು ಎಣಿಕೆ ಮಾಡುವ ಪ್ರಕ್ರಿಯೆಯಲ್ಲಿದ್ದ ಸಿಬ್ಬಂದಿಯಾಗಿದ್ದರು. ಸ್ವತಃ ಚಂಪತ್ ರಾಯ್ ಅವರ ಅತ್ಯಂತ ಆಪ್ತ ಸಹಾಯಕನೇ ಸಿಸಿಟಿವಿ ಸಾಕ್ಷ್ಯಗಳ ಆಧಾರದ ಮೇಲೆ…

Read More

ಮಂಗಳೂರು, ನಗರದ ಮಂಗಳಾದೇವಿ ಸಮೀಪದಲ್ಲಿರುವ ಶ್ರೀ ರಾಮಕೃಷ್ಣ ಮಠದಲ್ಲಿ ಜೂನ್ 21, ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ರಾಮಕೃಷ್ಣ ಮಠ, ಮಂಗಳೂರು ಇಲ್ಲಿಯ ಬಾಲಕಾಶ್ರಮದ ವಾರ್ಡನ್ ಆಗಿರುವ ಸ್ವಾಮಿ ಯುಗೇಶಾನಂದಜಿ ಆಶೀರ್ವಚನದಲ್ಲಿ ಯೋಗ ವಿಜ್ಞಾನ ಎಂಬುದು ಸಾವಿರಾರು ವರ್ಷಗಳ ಹಳೆಯದು. ವೈದಿಕ ಕಾಲದಿಂದಲೂ ಭಾರತದಲ್ಲಿ ಯೋಗವನ್ನು ಪರಿಚಯಿಸಲಾಗಿದೆ. ಇದು ಹಲವಾರು ವರ್ಷಗಳಿಂದ ಭಾರತೀಯರ ಜೀವನಶೈಲಿಯ ಒಂದು ಭಾಗವಾಗಿ ಉಳಿದಿದೆ. ಯೋಗವು ಭಾರತೀಯ ಸಂಸ್ಕೃತಿ ಮತ್ತು ನಾಗರಿಕತೆಯ ಒಂದು ಪ್ರಮುಖ ಭಾಗವಾಗಿದೆ. ಇದರಲ್ಲಿ ಮಾನವೀಯತೆ ಮತ್ತು ಆಧ್ಯಾತ್ಮಿಕ ಉನ್ನತಿಯ ಭೌತಿಕ ಅಂಶಗಳ ಗುಣಲಕ್ಷಣಗಳಿವೆ. ಪತಂಜಲಿ ಋಷಿಯವರು ತಮ್ಮ ಯೋಗ ಶಾಸ್ತ್ರದಲ್ಲಿ ಅಷ್ಟಾಂಗ ಯೋಗದ (ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧಾರಣಾ ಧ್ಯಾನ ಮತ್ತು ಸಮಾಧಿ) ತಿಳಿಸಿರುತ್ತಾರೆ. ಇಲ್ಲಿ ಯೋಗದ ಪ್ರಥಮ ಮೆಟ್ಟಿಲು, ದ್ವಿತೀಯ ಮೆಟ್ಟಿಲುಗಳಾದ ಯಮ, ನಿಯಮದ ಬಗ್ಗೆ ಅರಿತು. ತಿಳಿದು ವ್ಯಕ್ತಿ ತನ್ನ ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ಆಸನ ಕಲಿಯಲು ಸುಲಭವಾಗುತ್ತದೆ. ಯೋಗವು ಭಾರತದ ಪ್ರಾಚೀನ ಸಂಪ್ರದಾಯದ ಅಮೂಲ್ಯ…

Read More

ಪುತ್ತೂರು, ಜೂನ್ 25: ಗ್ರಾಮಜನ್ಯ ರೈತ ಉತ್ಪಾದಕ ಕಂಪನಿ ನಿಯಮಿತ, ಹಿಂದಾರು–ಮುಂಡೂರು ವತಿಯಿಂದ ನಿರ್ಮಿಸಲಾದ ಆಧುನಿಕ ಶೈತ್ಯಾಗಾರವನ್ನು ಇಂದು ನಡೆದ ಸಮಾರಂಭದಲ್ಲಿ ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಬಳಿಕ ಶೈತ್ಯಾಗಾರದ ಪ್ರವೇಶ ದ್ವಾರವನ್ನು ತೆರೆಯುವ ಮೂಲಕ ಸಾರ್ವಜನಿಕ ಬಳಕೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಶೈತ್ಯಾಗಾರದ ಪ್ರಥಮ ಗ್ರಾಹಕರಾದ ಅಭಿಜ್ಞಾನ ಫುಡ್ಸ್ (ನಿತ್ಯ ಚಪಾತಿ) ಸಂಸ್ಥೆಯ ಶ್ರೀ ರಾಧಾಕೃಷ್ಣ ಹಾಗೂ ಪಿಂಗಾರ ರೈತ ಉತ್ಪಾದಕ ಕಂಪನಿಯ ಶ್ರೀ ರಾಮಕಿಶೋರ್ ಮಂಚಿ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಹಲಸು ಮೇಳದಲ್ಲಿ ಪುತ್ತೂರಿಗೆ ಶೈತ್ಯಾಗಾರದ ಅಗತ್ಯತೆಯನ್ನು ಪ್ರಸ್ತಾಪಿಸಿ, ಈ ಯೋಜನೆಗೆ ಪ್ರೇರಣೆ ನೀಡಿದ ಮುಳಿಯ ಸಮೂಹ ಸಂಸ್ಥೆಯ ಮುಖ್ಯಸ್ಥ ಶ್ರೀ ಕೇಶವ ಪ್ರಸಾದ್ ಮುಳಿಯ ಅವರನ್ನೂ ಗೌರವಿಸಲಾಯಿತು. ಸಂಸ್ಥೆಯ ನಿರ್ದೇಶಕರಾದ ಶ್ರೀ ನಿರಂಜನ್ ಪೋಳ್ಯ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಶ್ರೀ ರಾಮಪ್ರತೀಕ್ ಕರಿಯಾಲ್ ಪ್ರಾಸ್ತಾವಿಕ ಭಾಷಣ ಮಾಡಿ, ಗ್ರಾಮಜನ್ಯ ಸಂಸ್ಥೆ…

Read More