Author: admin
ಮಂಗಳೂರು(reporterkarnataka.com): ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರು ಕಳೆದ ವರ್ಷ ನವರಾತ್ರಿ ಸಂದರ್ಭದಲ್ಲಿ ನೀಡಿದ್ದ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಅದೇನೆಂದರೆ 2026ರಲ್ಲಿ ತನ್ನ ನೆಚ್ಚಿನ ನಾಯಕ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಭವಿಷ್ಯವಾಣಿ ನುಡಿದಿದ್ದರು. ಆ ವೀಡಿಯೊ ಇದೀಗ ವೈರಲ್ ಆಗುತ್ತಿದೆ. ಮಿಥುನ್ ಹೇಳಿದ್ದು ನಿಜವಾಯಿತು ಎಂಬ ಚರ್ಚೆ ಕರಾವಳಿ ಭಾಗದಲ್ಲಿ ಈಗ ಬಿರುಸಾಗಿ ನಡೆಯುತ್ತಿದೆ.
ಕರಾವಳಿ ಬೆಡಗಿ ನಟಿ ಶುಭಾ ಪೂಂಜಾ-ಸುಮಂತ್ ದಾಂಪತ್ಯದಲ್ಲಿ ಬಿರುಕು: ಡಿವೋರ್ಸ್ ಕೋರಿ ಫ್ಯಾಮಿಲಿ ಕೋರ್ಟ್ ಗೆ ಮೊರೆ
ಬೆಂಗಳೂರು(reporterkarnataka.com): ಕನ್ನಡ ಚಿತ್ರರಂಗದ ಖ್ಯಾತ ನಟಿ, ‘ಬಿಗ್ ಬಾಸ್’ ಖ್ಯಾತಿಯ ಶುಭಾ ಪೂಂಜಾ ಅವರ ವೈವಾಹಿಕ ಬದುಕು ಮದುವೆಯಾದ ನಾಲ್ಕೇ ವರ್ಷಕ್ಕೆ ಮುರಿದು ಬೀಳುವ ಸೂಚನೆ ಸಿಕ್ಕಿದೆ. ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಕನ್ನಡದ ‘ಮೊಗ್ಗಿನ ಮನಸು’ ಸೇರಿದಂತೆ ಹಲವು ಸಿನಿಮಾಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಶುಭಾ ಪೂಂಜಾ, ಉದ್ಯಮಿ ಸುಮಂತ್ ಬಿಲ್ಲವ ಅವರನ್ನು ಪ್ರೀತಿಸಿ 2022ರ ಜನವರಿಯಲ್ಲಿ ಮದುವೆಯಾಗಿದ್ದರು. ಮದುವೆಯಾದ ಬಳಿಕ ಈ ದಂಪತಿ ಅತ್ಯಂತ ಖುಷಿ ಖುಷಿಯಾಗಿಯೇ ಕಾಲ ಕಳೆದಿದ್ದರು. ಆದರೆ, ಈಗ ಏಕಾಏಕಿ ಬೇರೆ ಆಗಲು ಮುಂದಾಗಿರೋದು ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ.
ತಡರಾತ್ರಿ ಸರ್ಕಾರಿ ಆಸ್ಪತ್ರೆಗೆ ಯು.ಟಿ. ಖಾದರ್ ಭೇಟಿ: ಗರ್ಭಿಣಿಯನ್ನ ನೆಲದ ಮೇಲೆ ಕೂರಿಸಿದ್ದ ಕಂಡು ಆರೋಗ್ಯ ಸಚಿವ ಕೆಂಡಾಮಂಡಲ
ಬೆಂಗಳೂರು(reporterkarnataka.com): ನೂತನ ಸಚಿವರಿಗೆ ಖಾತೆ ಹಂಚಿಕೆಯಾಗ್ತಿದ್ದಂತೆ ಫುಲ್ ಅಲರ್ಟ್ ಆಗಿದ್ದಾರೆ. ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು ಟಿ ಖಾದರ್ ಅವರು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ಕೊಟ್ಟಿದ್ದಾರೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಜಯನಗರ ಜನರಲ್ ಆಸ್ಪತ್ರೆಗೆ ಭೇಟಿ ನೀಡಿದ ಯುಟಿ ಖಾದರ್ ಅವರು, ಆಸ್ಪತ್ರೆ ಸಿಬ್ಬಂದಿ ಬಗ್ಗೆ ಪರಿಶೀಲನೆ, ಸ್ವಚ್ಛತೆ, ರೋಗಿಗಳಿಗೆ ಚಿಕಿತ್ಸೆ ವಿಧಾನ, ತುರ್ತು ಚಿಕಿತ್ಸಾ ಘಟಕದಲ್ಲಿ ಪರಿಶೀಲನೆ ನಡೆಸಿದ್ದಾರೆ. *ಸಿಬ್ಬಂದಿಗಳಿಗೆ ಚಾಟಿ ಬೀಸಿದ ಖಾದರ್:* ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆ ಪರಿಶೀಲನೆ ನೂತನ ಸಚಿವ ಖಾದರ್ ಇಳಿದಿದ್ದಾರೆ. ಹಾಜರಾತಿಯಲ್ಲಿ ಗೈರಾಗಿರುವ ಸಿಬ್ಬಂದಿಗಳಿಗೆ ಖಾದರ್ ಚಾಟಿ ಬೀಸಿದ್ದಾರೆ. ಅಲ್ಲದೇ ರೋಗಿಗಳ ಬಳಿಯೂ ತೆರಳಿ ಸಚಿವ ಖಾದರ್ ಮಾಹಿತಿ ನೀಡಿದ್ದಾರೆ. ತಡರಾತ್ರಿ ಆಸ್ಪತ್ರೆ ಆವರಣದಲ್ಲಿದ್ದ ಪ್ರತಿಯೊಬ್ಬರಿಂದಲೂ ಖಾದರ್ ಮಾಹಿತಿ ಪಡೆದಿದ್ದಾರೆ
ಬೆಂಗಳೂರು: ರಾಮಲಿಂಗಾರೆಡ್ಡಿ (Ramalinga Reddy) ಅವರ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡು ರಾಜ್ಯ ಬಿಜೆಪಿ (BJP) ಸಾಮಾಜಿಕ ಜಾಲತಾಣದಲ್ಲಿ ಲೇವಡಿ ಮಾಡಿದೆ. ಕಾಂಗ್ರೆಸ್ ಆಂತರಿಕ ಬಿಕ್ಕಟ್ಟನ್ನು ಲೇವಡಿ ಮಾಡಿರುವ ಬಿಜೆಪಿ, “ಪಿಚ್ಚರ್ ಅಭಿ ಬಾಕಿ ಹೈ..! ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ರಾಮಲಿಂಗಾ ರೆಡ್ಡಿ ಅವರು ಇಂಟರ್ವೆಲ್ ಸಿಎಂ ಡಿಕೆಶಿವಕುಮಾರ್ ಅವರ ಅವಧಿಯಲ್ಲೂ ಕಿತ್ತಾಟ ಮುಂದುವರಿಯಲಿದೆ ಎಂಬ ದೊಡ್ಡ ಸಂದೇಶ ರವಾನಿಸಿದಂತಿದೆ” ಎಂದು ಟೀಕಿಸಿದೆ.
