ಗುರುದತ್ತ ಗಾಣಿಗ ನಿರ್ದೇಶನದ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಮತ್ತು ರಾಜ್ ಬಿ ಶೆಟ್ಟಿ ನಟಿಸಿದ್ದಾರೆ. ಕರಾವಳಿ ಚಿತ್ರ ಜುಲೈ 24 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಕಳೆದ ವರ್ಷ, ಜುಲೈ 25ರಂದು ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ‘ಸು ಫ್ರಮ್ ಸೋ’ ಚಿತ್ರ ಸ್ಯಾಂಡಲ್ವುಡ್ಗೆ ಹೊಸ ಚೈತನ್ಯ ತುಂಬಿತ್ತು. 6 ಕೋಟಿ ಬಜೆಟ್ನ ಈ ಚಿತ್ರ 100 ಕೋಟಿ ಕಲೆಕ್ಷನ್ ಮಾಡಿತ್ತು. ಒಂದು ವರ್ಷದ ನಂತರ ಕರಾವಳಿ ಪ್ರದೇಶದ ಕಥಾಹಂದರ ಹೊಂದಿರುವ ಮತ್ತೊಂದು ಕನ್ನಡ ಚಿತ್ರ ಬಿಡುಗಡೆಯಾಗಲಿದ್ದು, ವ್ಯಾಪಕ ನಿರೀಕ್ಷೆಗಳನ್ನು ಮೂಡಿಸಿದೆ. ಸು ಫ್ರಮ್ ಸೋ ಚಿತ್ರ ಕಳೆದ ವರ್ಷ ಜುಲೈ-25,2025 ರಂದು ತೆರೆ ಕಂಡಿತ್ತು, ಈ ವರ್ಷ ಜುಲೈ-25 ‘ಕರಾವಳಿ’ ಚಿತ್ರ ಬಿಡುಗಡೆಯಾಗುತ್ತಿದೆ. ಈಗಾಗಲೇ ಈ ಚಿತ್ರದ ಪೋಸ್ಟರ್ ಮತ್ತು ಟೀಸರ್ನಿಂದ ಹೆಚ್ಚು ಗಮನ ಸೆಳೆದಿದೆ.
ಚಿತ್ರದಲ್ಲಿ ಸಂಪದ ನಾಯಕಿಯಾಗಿ ನಟಿಸಿದರೆ, ಮಿತ್ರ, ರಮೇಶ್ ಇಂದಿರಾ ಮತ್ತು ಶ್ರೀಧರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ವಿಕೆ ಫಿಲ್ಮ್ ಅಸೋಸಿಯೇಷನ್ನ ಸಹಯೋಗದೊಂದಿಗೆ ಗಾಣಿಗ ಫಿಲ್ಮ್ಸ್ ಅಡಿಯಲ್ಲಿ ನಿರ್ಮಿಸಲಾದ ಮತ್ತು ಕೆವಿಎನ್ ಪ್ರೊಡಕ್ಷನ್ಸ್ ಪ್ರಸ್ತುತಪಡಿಸಿದ ಕರಾವಳಿ ಚಿತ್ರಕ್ಕೆ ಸಚಿನ್ ಬಸ್ರೂರ್ ಅವರ ಸಂಗೀತ ಸಂಯೋಜನೆ ಇದೆ ಮತ್ತು ಅಭಿಮನ್ಯು ಸದಾನಂದನ್ ಅವರ ಛಾಯಾಗ್ರಹಣವಿದೆ.

